ಎಲಿವೇಟೆಡ್ ಕಾರಿಡಾರ್ ವಿರೋಧಿಸುವವರ ಪ್ರತಿಕ್ರಿಯೆ ಸ್ವೀಕರಿಸಲು ಸಿದ್ಧ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಮಾ. 16: ‘ಎಲಿವೇಟೆಡ್ ಕಾರಿಡಾರ್ ವಿರೋಧಿಸಿ ಪ್ರತಿಭಟನೆ ನಡೆಸುವವರ ಪ್ರತಿಕ್ರಿಯೆಯನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಲು ತಾನು ಸಿದ್ಧ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಪ್ರತಿಭಟನಾಕಾರರಿಗೆ ಆಹ್ವಾನ ನೀಡಿದ್ದಾರೆ.
ಶನಿವಾರ ಈ ಬಗ್ಗೆ ಟ್ವಿಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಅಭಿವೃದ್ಧಿಗೆ ಸಂಚಾರ ದಟ್ಟಣೆ ಬಹುದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಸಂಚಾರ ದಟ್ಟಣೆಗೆ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಸರಕಾರ ಮುಂದಾಗಿದೆ. ಆದರೆ, ಕೆಲವು ನಾಗರಿಕ ಸಂಘಟನೆಗಳು ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿವೆ. ಅವರೆಲ್ಲಾ ನಮ್ಮ ಬಳಿ ಬಂದು ತಮ್ಮ ಕಾಳಜಿ ವ್ಯಕ್ತಪಡಿಸಲಿ. ನಿಮ್ಮ ಪ್ರತಿಕ್ರಿಯೆಯನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸುವೆ ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
Next Story