ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ನಾಮಪತ್ರ ಸಲ್ಲಿಕೆ
ಮಂಡ್ಯ, ಮಾ.20: ಮಂಡ್ಯ ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಷ್ ಪಕ್ಷೇತರ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸುಮಲತಾ ಮೂರು ಸೆಟ್ಗಳ ನಾಮಪತ್ರ ಸಲ್ಲಿಸಿದರು. ಈ ವೇಳೆ ಪುತ್ರ ಅಭಿಷೇಕ್, ನಟ ದೊಡ್ಡಣ್ಣ ಹಾಗೂ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಾಥ್ ನೀಡಿದರು.
ಸುಮಲತಾ ನಾಮಪತ್ರ ಸಲ್ಲಿಸಲು ಬಂದಾಗ ಜಿಲ್ಲಾಧಿಕಾರಿ ಕಚೇರಿ ಹೊರಗೆ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಸುಮಲತಾ ಜನರತ್ತ ಕೈಬೀಸಿದರು. ನಾಮಪತ್ರ ಸಲ್ಲಿಕೆಯ ಬಳಿಕ ರೋಡ್ ಶೋ ನಡೆಸಿದ ಸುಮಲತಾ ಸಿಲ್ವರ್ ಪಾರ್ಕ್ನಲ್ಲಿ ನಡೆಯುವ ಸಮಾವೇಶದತ್ತ ತೆರಳಿದರು.
ಸುಮಲತಾ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಣದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಲಿದ್ದಾರೆ.
Next Story