ಕೊಡಗು ಪ್ರಕೃತಿ ವಿಕೋಪ: ಪರಿಹಾರ ಕಾಮಗಾರಿ ಪ್ರಗತಿಯಲ್ಲಿ- ಜಿಲ್ಲಾಧಿಕಾರಿ
ಮಡಿಕೇರಿ, ಮಾ.20: ಲೋಕಸಭಾ ಚುನಾವಣೆ ಕರ್ತವ್ಯ ನಿರ್ವಹಣೆ ಜೊತೆಗೆ ಪ್ರಕೃತಿ ವಿಕೋಪದ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದ್ದು, ಮನೆ ನಿರ್ಮಾಣದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಕೃತಿ ವಿಕೋಪ ಸಂಬಂಧ ಈಗಾಗಲೇ ಆರಂಭವಾಗಿರುವ ಕಾಮಗಾರಿಗಳು ಮುಂದುವರೆದಿವೆ, ಇದರಲ್ಲಿ ವಿಳಂಬ ಇಲ್ಲ. ಜೊತೆಗೆ ಪರಿಹಾರ ಕಾರ್ಯಗಳು ಮುಂದುವರೆದಿದ್ದು, ಇದಕ್ಕೆ ಯಾವುದೇ ರೀತಿಯಲ್ಲಿ ತಡೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಮುಂಗಾರು ಮಳೆ ಆರಂಭವಾಗುವುದರೊಳಗೆ ಮನೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ. ಈಗಾಗಲೇ ಈ ಸಂಬಂಧ ಪರಿಶೀಲನೆ ಮಾಡಲಾಗಿದೆ ಎಂದು ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದ್ದಾರೆ.
ಪ್ರಕೃತಿ ವಿಕೋಪ ಸಂಬಂಧ ತುರ್ತಾಗಿ ಆಗಬೇಕಿರುವ ಬಾಕಿ ಇರುವ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಅನುಮತಿಗಾಗಿ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಸ್ಪಷ್ಟಪಡಿಸಿದ್ದಾರೆ.
Next Story