ಲೋಕಸಭೆ ಚುನಾವಣೆ: ಎರಡನೇ ದಿನ 16 ಉಮೇದುವಾರಿಕೆ ಸಲ್ಲಿಕೆ
ಬೆಂಗಳೂರು,ಮಾ.20: ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭದ ಎರಡನೇ ದಿನವಾದ ಇಂದು 14 ಮಂದಿ ಪಕ್ಷೇತರರು ಸೇರಿದಂತೆ 16 ಮಂದಿ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಸೃಷ್ಟಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅದ್ದೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದಾರೆ. ಸುಮಲತಾ ಸೇರಿ ಮಂಡ್ಯ ಕ್ಷೇತ್ರದಲ್ಲಿ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.
ಮೈಸೂರು- ಕೊಡಗು ಕ್ಷೇತ್ರದಿಂದ ಭಾರತೀಯ ಹೊಸ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಯೂಬ್ ಖಾನ್ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಮಧ್ಯೆ ಚಿತ್ರನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದಿಂದ ಬೆಂಗಳೂರು ಗ್ರಾಮಾಂತರ, ಬೆಂ.ದಕ್ಷಿಣ, ಕೇಂದ್ರ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದಿಂದ ಕ್ರಮವಾಗಿ ನಾಲ್ಕು ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
Next Story