ಲಾರಿ-ಕಾರು ಢಿಕ್ಕಿ: ದಂಪತಿ ಸಾವು - ಓರ್ವನಿಗೆ ಗಾಯ
ಶಿವಮೊಗ್ಗ, ಮಾ. 21: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ದಂಪತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಭದ್ರಾಪುರ ತಾಂಡ ಗ್ರಾಮದ ಬಳಿ ನಡೆದಿದೆ.
ದಾವಣಗೆಗೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಗ್ರಾಮದ ನಿವಾಸಿಗಳಾದ ಮಂಜುನಾಥ ಹಾಗೂ ಅವರ ಪತ್ನಿ ವಸಂತ ಮೃತಪಟ್ಟವರೆಂದು ಗುರುತಿಸಲಾಗಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೊರಬ ತಾಲೂಕಿನ ಆನವಟ್ಟಿಯಲ್ಲಿರುವ ತಮ್ಮ ಮಗನನ್ನು ನೋಡಲು ದಂಪತಿಯು ಕಾರಿನಲ್ಲಿ ಆಗಮಿಸುವ ವೇಳೆ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story