2016ನೆ ಸಾಲಿನ ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರಕಟ
ಬೆಂಗಳೂರು, ಎ.21: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ 147 ಗಣ್ಯರಿಗೆ 2016ನೆ ಸಾಲಿನ ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಮೇಯರ್ ಬಿಎನ್ ಮಂಜುನಾಥ ರೆಡ್ಡಿ ಗುರುವಾರ ಪ್ರಕಟಿಸಿದ್ದಾರೆ.
ಹಿರಿಯ ನಟ ಜೈ ಜಗದೀಶ್, ಹೊನ್ನವಳ್ಳಿ ಕೃಷ್ಣ, ಸ್ಯಾಂಡಲ್ವುಡ್ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್, ಡಿಂಗ್ರಿ ನಾಗರಾಜ್, ಸಿಬಿಐ ಡಿಐಜಿ ಸೋನಿಯಾ ನಾರಂಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದ 147 ಗಣ್ಯರು ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಮೇಯರ್ ತಿಳಿಸಿದ್ದಾರೆ.
Next Story