ನಿಖಿಲ್ ಕುಮಾರಸ್ವಾಮಿ ವಿರುದ್ಧ ಮತ್ತೊಂದು ದೂರು
ಮಂಡ್ಯ, ಎ.1: ಪ್ರಮಾಣ ಪತ್ರದಲ್ಲಿ ಗಂಭೀರ ಲೋಪ ಎಸಗಿರುವುದರಿಂದ ಲೋಕಸಭೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ನಾಮಪತ್ರ ರದ್ದುಪಡಿಸುವಂತೆ ಸಾಮಾಜಿಕ ಹೋರಾಟಗಾರ ಬಿ.ಎಸ್.ಗೌಡ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ರಾಮನಗರ ತಾಲೂಕಿನ ಕೇತೋಗಾನಹಳ್ಳಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಎಂದು ದಾಖಲಾಗಿದೆ. ಆದರೆ, ಮಂಡ್ಯದಲ್ಲಿ ಚುನಾವಣೆಗೆ ಸಲ್ಲಿಸಿರುವ ನಾಮಪತ್ರದಲ್ಲಿ ನಿಖಿಲ್ ಕೆ ಎಂದು ನಮೂದಾಗಿದೆ. ಇದು ಅಕ್ಷರಶಃ ಗಂಭೀರ ಲೋಪವಾಗಿದೆ ಎಂದು ಅವರು ದೂರಿದ್ದಾರೆ.
Next Story