ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ವರ್ಗಾವಣೆ
ಬೆಂಗಳೂರು, ಎ. 9: ಪಕ್ಷಪಾತ ಧೋರಣೆ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ.
ಮಂಡ್ಯ ಜಿಲ್ಲೆ ನೂತನ ಜಿಲ್ಲಾಧಿಕಾರಿಯನ್ನಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಡಾ.ಪಿ.ಸಿ.ಜಾಫರ್ ಅವರನ್ನು ತಕ್ಷಣವೇ ನಿಯುಕ್ತಿಗೊಳ್ಳುವಂತೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Next Story