ಚುನಾವಣೆಗಾಗಿ ಹಣದ ಬೇಡಿಕೆ ಪ್ರಕರಣ: ಮಾಜಿ ಸಂಸದ ಮಾದೇಗೌಡ, ಸಚಿವ ಪುಟ್ಟರಾಜು ವಿರುದ್ಧ ಪ್ರಕರಣ ದಾಖಲು
ಮಂಡ್ಯ, ಎ.10: ಹಣದ ಬೇಡಿಕೆ ಇಟ್ಟ ಪ್ರಕರಣ ಸಂಬಂಧ ಮಾಜಿ ಸಂಸದ ಜಿ.ಮಾದೇಗೌಡ ಹಾಗೂ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚುನಾವಣಾ ವೆಚ್ಚಕ್ಕೆ ಹಣ ನೀಡುವಂತೆ ಸಚಿವ ಸಿ.ಎಸ್.ಪುಟ್ಟರಾಜು ಜತೆ ಜಿ.ಮಾದೇಗೌಡರು ದೂರವಾಣಿ ಕರೆಮಾಡಿ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಬಿ.ಎಸ್.ಗೌಡ ಎಂಬುವರು ಚುನಾವಣಾಧಿಕಾರಿಗೆ ದೂರು ನೀಡಿದ್ದರು.
ಚುನಾವಣಾಧಿಕಾರಿ ಜಗದೀಶ್ ದೂರು ಆಧರಿಸಿ ಪ್ರಕರಣ ದಾಖಲಿಸಿರುವ ಪೊಲೀಸರು, ಪ್ರಕರಣವನ್ನು ಚುನಾವಣಾ ಆಯೋಗಕ್ಕೆ ಪ್ರಕರಣ ವರ್ಗಾಯಿಸಿದ್ದಾರೆಂದು ತಿಳಿದು ಬಂದಿದೆ.
Next Story