ಗ್ರಾಮಸ್ಥರಿಂದ ಸಿಎಂ ಕುಮಾರಸ್ವಾಮಿಗೆ ತರಾಟೆ
ಮಂಡ್ಯ, ಎ.11: ರೈತರ ಸಾಲಮನ್ನಾ ಕುರಿತಂತೆ ಪ್ರಚಾರ ಕಾಲಕ್ಕೆ ಭಾಷಣ ಮಾಡುತ್ತಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ಸಂಜೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದಿದೆ.
ಭಾಷಣಕ್ಕೆ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಉದ್ವೇಗಗೊಂಡ ಕುಮಾರಸ್ವಾಮಿ, ನಿಮಗೆ ಯಾರಿಗೆ ವೋಟ್ ಹಾಕ್ಬೇಕು ಅನ್ಸುತ್ತೆ ಅವರಿಗೇ ಹಾಕಿ. ನಿಮ್ಮ ಕಷ್ಟ ಸುಖಕ್ಕೆ ಯಾರು ಬರ್ತಾರೋ ನಾನು ನೋಡ್ತೀನಿ ಎಂದು ಸವಾಲು ಹಾಕಿದರು.
ಕುಮಾರಸ್ವಾಮಿ ಜತೆ ಗ್ರಾಮಸ್ಥರು ವಾಗ್ವಾದ ಮುಂದುವರಿಸಿದಾಗ ಮಧ್ಯೆ ಪ್ರವೇಶಿಸಿದ ಸ್ಥಳೀಯ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ನಂತರ, ಮುಖ್ಯಮಂತ್ರಿ ಮುಂದಿನ ಗ್ರಾಮಕ್ಕೆ ಪ್ರಚಾರಕ್ಕೆ ತೆರಳಿದರು.
Next Story