ಧ್ರುವನಾರಾಯಣ್ ಪರ ಪ್ರಚಾರ: ಜೆಡಿಎಸ್ ಮುಖಂಡ ಮಂಜುನಾಥ್ ಸ್ಪಷ್ಟನೆ
ಹನೂರು, ಎ.14: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಆರ್.ಧ್ರುವನಾರಯಣ್ ಪರ ಮತಯಾಚನೆ ಮಾಡಲಾಗುವುದು ಎಂದು ಜೆಡಿಎಸ್ ಮುಖಂಡ ಮಂಜುನಾಥ್ ತಿಳಿಸಿದ್ದಾರೆ.
ಹನೂರಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ವರಿಷ್ಠರ ತೀರ್ಮಾನದಂತೆ ಧ್ರುವನಾರಾಯಣ್ ಪರ ಮತ ಯಾಚನೆ ಮಾಡಲು ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಾಗುವುದು ಎಂದು ತಿಳಿಸಿದರು.
ಕೆಲ ಪತ್ರಿಕೆಗಳಲ್ಲಿ ಮಂಜುನಾಥ್ ಮೈತ್ರಿ ಪಾಲನೆ ಮಾಡದೆ, ತೆರೆ ಮರೆಯಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪ ಮಾಡಲಾಗಿತ್ತು. ಆದರೆ ಇದು ಸತ್ಯಕ್ಕೆ ದೂರವಾದ ಮಾತು. ಎರಡು ದಿನಗಳ ಧ್ರುವನಾರಾಯಣ್ ಜೊತೆಗೂಡಿ ಸುದ್ದಿಗೋಷ್ಠಿ ನಡೆಸಿ ಸಂಪೂರ್ಣ ಬೆಂಬಲ ವ್ಯಕ್ತ ಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಶಿವಮೂರ್ತಿ, ಜೆಡಿಎಸ್ ಮುಖಂಡರಾದ ರಾಜಶೇಖರಮೂರ್ತಿ, ಬಾಬು, ಬಸವರಾಜು, ಪಾಳ್ಯ ಸಿದ್ದಪ್ಪಾಜಿ., ರಾಜಣ್ಣ, ಕುಮಾರ್, ಹನೂರು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಪ್ರಸನ್ನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.