ಮೋದಿ ವೈಯಕ್ತಿಕ ಟೀಕೆ ಮಾಡುತ್ತಿರುವುದು ಸರಿಯಲ್ಲ: ಪಿಜಿಆರ್ ಸಿಂಧ್ಯಾ
ಬಳ್ಳಾರಿ, ಎ. 19: ಪ್ರಧಾನಿ ಮೋದಿ ತಮ್ಮ ಸರಕಾರದ ಐದು ವರ್ಷಗಳ ಸಾಧನೆಗಳ ಬಗ್ಗೆ ಮಾತನಾಡದೆ, ಕಾಂಗ್ರೆಸ್ ಮುಖಂಡರ ಕುರಿತು ವೈಯಕ್ತಿಕ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿಜಿಆರ್ ಸಿಂಧ್ಯಾ ಇಂದಿಲ್ಲಿ ಆಕ್ಷೇಪಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಎಪ್ಪತ್ತು ವರ್ಷಗಳಲ್ಲಿ ದೇಶದಲ್ಲಿ ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆದಿದ್ದರೂ ಅವುಗಳನ್ನು ಉಲ್ಲೇಖಿಸದೆ, ತಮ್ಮ ಅವಧಿಯಲ್ಲಿ ನಡೆದ್ದನ್ನೆ ದೊಡ್ಡದು ಎನ್ನುವಂತೆ ಮೋದಿ ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರಕಾರ ಮತ್ತು ಈಗಿನ ಮೈತ್ರಿ ಸರಕಾರ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದೆ. ಅದಕ್ಕಾಗಿ ಮೈತ್ರಿ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರನ್ನು ಬೆಂಬಲಿಸುವ ಮೂಲಕ ಆಯ್ಕೆ ಮಾಡಬೇಕು ಎಂದು ಕೋರಿದರು.
Next Story