ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ಮಂಡ್ಯ, ಎ.21: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ರವಿವಾರ ಬೆಳಗ್ಗೆ ನಡೆದಿದೆ.
ಗ್ರಾಮದ ತಮ್ಮಣ್ಣ ಅವರ ಮಗ ರವಿ (45) ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ. ಮೈಸೂರು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಚಾಮುಂಡಿ ಎಕ್ಸ್ಪ್ರೆಸ್ ರೈಲಿಗೆ ತಲೆಕೊಟ್ಟು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮಂಡ್ಯ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story