ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ: ರಾಜ್ಯ ಸರಕಾರದಿಂದ ವಿಶೇಷಾಧಿಕಾರಿ ನೇಮಕ
ಬೆಂಗಳೂರು, ಎ.22: ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಒಬ್ಬ ವಿಶೇಷಾಧಿಕಾರಿ ಅನ್ನು ನೇಮಿಸುವ ಜೊತೆಗೆ, ಮೃತರ ಸಂಬಂಧಿಕರನ್ನು ಶ್ರೀಲಂಕಾಗೆ ಕಳುಹಿಸುವ ಏರ್ಪಾಡು ಮಾಡಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಹೇಳಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತರ ಪಾರ್ಥೀವ ಶರೀರ ರಾಜ್ಯಕ್ಕೆ ತರುವ ಬಗ್ಗೆ ಮನವಿ ಮಾಡಿದ್ದು, ಈ ಸಂಬಂಧ ಈಗಾಗಲೇ ರಮೇಶ್ ಬಾಬು ಅವರನ್ನು ವಿಶೇಷಾಧಿಕಾರಿ ಆಗಿ ನೇಮಕ ಮಾಡಲಾಗಿದೆ. ಅವರು ಪ್ರವಾಸ ಕೈಗೊಂಡವರ ಕುರಿತು ಮಾಹಿತಿ ಸಂಗ್ರಹ ಮಾಡಲಿದ್ದಾರೆ.
ಅದೇ ರೀತಿ, ಐಎಎಸ್ ಅಧಿಕಾರಿ ಅಂಜುಮ್ ಪರ್ವೇಝ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದರು.
Next Story