ಲೋಕಸಭಾ ಚುನಾವಣೆ: ಜಾತ್ರೆ-ಸಂತೆಗಳ ನಿಷೇಧ
ಬೆಳಗಾವಿ, ಎ.22: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಎ.23ರಂದು ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಆರ್.ವಿಶಾಲ್, ಸಿಆರ್ಪಿಸಿ ಕಲಂ 1973 ಸೆಕ್ಷನ್ 144ರ ಅಡಿಯಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಡೆಯುವ ಜಾತ್ರೆ ಮತ್ತು ಸಂತೆಗಳನ್ನು ನಿಷೇಧಿಸಿ ಆದೇಶಿಸಿದ್ದಾರೆ.
ಈ ಆದೇಶದ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಜರುಗುವ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯನ್ನು ಶಾಂತ ಹಾಗೂ ಸುಗಮ ರೀತಿಯಿಂದ ನಡೆಸಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಎ.23 ರಂದು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಜರುಗುವ ವಾರದ ಸಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
Next Story