ರಮೇಶ್ ಜಾರಕಿಹೊಳಿ ಪಕ್ಷ ತೊರೆದರೆ ಸಮಸ್ಯೆಯಿಲ್ಲ: ಶಾಮನೂರು ಶಿವಶಂಕರಪ್ಪ
ದಾವಣಗೆರೆ,ಎ.23: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಕ್ಷ ಬಿಟ್ಟುಹೋದರೆ ಸಮಸ್ಯೆಯಿಲ್ಲ. ಬಿಜೆಪಿಯವರಿಂದ ಅಡ್ವಾನ್ಸ್ ತೆಗೆದುಕೊಂಡಿದ್ದರೆ ಹೋಗುತ್ತಾರೆ ಎಂದು ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ನಗರದ ಎಂಸಿಸಿ ಬಿ ಬ್ಲಾಕ್ನ ಐಎಂಎ ಹಾಲ್ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಕ್ಷ ಬಿಟ್ಟು ಹೋದರೆ ಸಮಸ್ಯೆ ಇಲ್ಲ. ಬಿಜೆಪಿಯವರಿಂದ ಅಡ್ವಾನ್ಸ್ ತೆಗೆದುಕೊಂಡರೆ ಹೋಗುತ್ತಾರೆ. ಅದರಿಂದ ಸರ್ಕಾರಕ್ಕೆ ಸಮಸ್ಯೆ ಇಲ್ಲ. ಆತ ಯಾವಾಗಲೋ ಹೋಗುವ ಗಿರಾಕಿ ಎಂದು ಮೊದಲೇ ಗೊತ್ತಿತ್ತು ಎಂದರು.
ಸಿದ್ದರಾಮಯ್ಯ ಸಿಎಂ ಆಗುವ ವಿಚಾರದ ಕುರಿತು ಮಾತನಾಡಿದ ಅವರು, ನಾನು ಸಹ ಸಿಎಂ ಆಗುತ್ತೇನೆ. ಎಲ್ಲರಿಗೂ ಸಿಎಂ ಆಗುವ ಹಕ್ಕಿದೆ. ಅದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದರು.
Next Story