ವಿದ್ಯಾರ್ಥಿನಿ ಮಧು ನಿಗೂಢ ಸಾವು ಪ್ರಕರಣ: ಆರೋಪಿ ಸಿಐಡಿ ವಶಕ್ಕೆ
ರಾಯಚೂರು, ಎ.24: ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ನಿಗೂಢ ಸಾವು ಪ್ರಕರಣ ಸಂಬಂಧ ಆರೋಪಿ ಸುದರ್ಶನ್ ಎಂಬಾತನನ್ನು ಸಿಐಡಿ ಬುಧವಾರ ವಶಕ್ಕೆ ಪಡೆದಿದೆ.
ಪ್ರಕರಣ ಸಂಬಂಧ ಸುದರ್ಶನ್ ನನ್ನು ವಿಚಾರಣೆಗೊಳಪಡಿಸಲು 10 ದಿನ ವಶಕ್ಕೆ ನೀಡುವಂತೆ ಸಿಐಡಿಯಿಂದ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಆರೋಪಿಯನ್ನು ನಾಲ್ಕು ದಿನ ಸಿಐಡಿ ವಶಕ್ಕೆ ನೀಡಿ ಜೆಎಂಎಫ್ಸಿ 3ನೆ ನ್ಯಾಯಾಲಯವು ಆದೇಶ ನೀಡಿದೆ.
ಇದರ ಅನ್ವಯ ಪೊಲೀಸ್ ಕಸ್ಟಡಿಯಿಂದ ಸುದರ್ಶನ್ ಯಾದವ್ನನ್ನು ಸಿಐಡಿ ತಂಡದವರು ವಶಕ್ಕೆ ತೆಗೆದುಕೊಂಡು ವಿಚಾರಣೆಗಾಗಿ ಕರೆದೊಯ್ದಿದ್ದಾರೆ.
ಪ್ರತಿಭಟನೆ: ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಕ್ರೂರವಾಗಿ ಕೊಲೆ ಮಾಡಿದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿ ಜಸ್ಟಿಸ್ ಫಾರ್ ಮಧು ಹೋರಾಟ ಸಮಿತಿ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುತ್ತಿದೆ.
Next Story