ಮಗುವಿಗೆ ಬೆಂಕಿ ಹಚ್ಚಿ ಕೊಂದು, ಆತ್ಮಹತ್ಯೆಗೆ ಶರಣಾದ ತಾಯಿ
ಚಾಮರಾಜನಗರ,ಎ.24: ಮಗುವಿಗೆ ಬೆಂಕಿ ಹಚ್ಚಿ, ಬಳಿಕ ತಾಯಿಯೂ ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.
ಗ್ರಾಮದ ಸೋಮಶೇಖರ್ ಎಂಬುವವರ ಪತ್ನಿ ಮಹಾಲಕ್ಷ್ಮಿ(25) ಹಾಗೂ ಎರಡೂವರೆ ವರ್ಷದ ಮಗು ಮೃತಪಟ್ಟವರು.
ಮಹಾಲಕ್ಷ್ಮಿಯನ್ನು ನಾಲ್ಕು ವರ್ಷದ ಹಿಂದೆ ದೊಡ್ಡಮೋಳೆ ಗ್ರಾಮದ ಸೋಮಶೇಖರನಿಗೆ ವಿವಾಹ ಮಾಡಿಕೊಡಲಾಗಿತ್ತು. ಆದರೆ ಸೋಮಶೇಖರ ದಿನನಿತ್ಯ ಕುಡಿದು ಬಂದು ಮಹಾಲಕ್ಷ್ಮಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇದೇ ಕಾರಣಕ್ಕೆ ಮನನೊಂದು ಇಂದು ಸಂಜೆ ಮಗುವಿಗೆ ಬೆಂಕಿ ಹಚ್ಚಿ ಕೊಂದು, ಬಳಿಕ ತಾನೂ ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ಗಂಡ ಸೋಮಶೇಖರ್ ಹಾಗೂ ಅತ್ತೆ-ಮಾವ ನಾಪತ್ತೆಯಾಗಿದ್ದು, ಇವರ ಪತ್ತೆಗಾಗಿ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ರಮೇಶ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ತನಿಖೆಯ ಬಳಿಕವಷ್ಟೇ ನಿಖರ ಕಾರಣ ತಿಳಿದುಬರಬೇಕಿದೆ.
Next Story