ಮಾಜಿ ಶಾಸಕ ಎನ್.ಬಿ.ನಂಜಪ್ಪ ನಿಧನಕ್ಕೆ ಮುಖ್ಯಮಂತ್ರಿ ಶೋಕ
ಬೆಂಗಳೂರು, ಎ.27: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಎನ್.ಬಿ.ನಂಜಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಒಂದೇ ಅವಧಿಗೆ ಶಾಸಕರಾಗಿದ್ದರೂ ಉತ್ತಮ ವಾಕ್ಚಾತುರ್ಯದ ಮೂಲಕ ಸದನದಲ್ಲಿ ಅನೇಕ ವಿಚಾರಗಳ ಮೇಲೆ ಬೆಳಕು ಚೆಲ್ಲಿ ಉತ್ತಮ ಸಂಸದೀಯಪಟು ಎನಿಸಿಕೊಂಡಿದ್ದರು. ಅವರ ನಿಧನದಿಂದ ಹಿರಿಯ ತಲೆಮಾರಿನ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Next Story