ಕಾಂಗ್ರೆಸ್ಗೆ ಸೋಲಿನ ಭೀತಿ: ಡಾ.ಉಮೇಶ್ ಜಾಧವ್
ಕಲಬುರಗಿ, ಮೇ 11: ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭೀತಿ ಎದುರಾಗಿದೆ. ಆದುದರಿಂದಲೇ, ಇಡೀ ಸರಕಾರವೇ ಬಂದು ಚಿಂಚೋಳಿ ಕ್ಷೇತ್ರದಲ್ಲಿ ಠಿಕಾಣಿ ಹೂಡಿದೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಟೀಕಿಸಿದ್ದಾರೆ.
ಶನಿವಾರ ಚಿಂಚೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಸತ್ಯ. ಈ ಹಿಂದೆ ಕಾಂಗ್ರೆಸ್ ನಾಯಕರು ನಮ್ಮ ಕುಟುಂಬ ಸದಸ್ಯರಿಗೆ ಟಿಕೆಟ್ ಕೊಟ್ಟು ಸೋಲಿಸಿದ್ದಾರೆ. ನನ್ನನ್ನೂ ಅದೇ ರೀತಿ ರಾಜಕೀಯವಾಗಿ ಕೆಳಗೆ ಬೀಳಿಸಲು ಪ್ರಯತ್ನಿಸಿದ್ದರೆಂದು ಆರೋಪಿಸಿದರು.
Next Story