ಡ್ರಾಪ್ ನೆಪದಲ್ಲಿ ದರೋಡೆ ಮಾಡುತ್ತಿದ್ದವನ ಬಂಧನ
ಮಂಡ್ಯ, ಮೇ 12: ಮಹಿಳೆಯರನ್ನು ಡ್ರಾಪ್ ಮಾಡುವ ನೆಪದಲ್ಲಿ ಕಾರಿನಲ್ಲಿ ಕೂರಿಸಿಕೊಂಡು ದರೋಡೆ ಮಾಡುತ್ತಿದ್ದವನನ್ನು ನಾಗಮಂಗಲ ತಾಲೂಕು ಬೆಳ್ಳೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆ ಹುಲಿಯೂರು ದುರ್ಗದ ವೆಂಕಟೇಶ್ ಬಂಧಿತ ಆರೋಪಿ. ಹೆದ್ದಾರಿಯಲ್ಲಿ ಬಸ್ಗಾಗಿ ಕಾಯುತ್ತಿದ್ದ ಮಹಿಳೆಯರನ್ನು ಡ್ರಾಪ್ ಕೊಡುವುದಾಗಿ ಹೇಳಿ ಅವರಲ್ಲಿದ್ದ ಚಿನ್ನಾಭರಣ, ಹಣ ದರೋಡೆ ಮಾಡುತ್ತಿದ್ದ ಎನ್ನಲಾಗಿದೆ.
Next Story