ಹನೂರು ಪಟ್ಟಣದ ಅಭಿವೃದ್ದಿಯಲ್ಲಿ ಕಾಂಗ್ರೆಸ್ ಪಾತ್ರ ಬಹಳಷ್ಟಿದೆ: ಸಚಿವ ಪುಟ್ಟರಂಗಶೆಟ್ಟಿ
ಹನೂರು: ಕಾಂಗ್ರೆಸ್ ಸದಾ ನುಡಿದಂತೆ ನಡೆದಿರುವ ಪಕ್ಷವಾಗಿದ್ದು, ಹನೂರು ಪಟ್ಟಣದ ಅಭಿವೃದ್ದಿಯಲ್ಲಿ ನಮ್ಮ ಸರ್ಕಾರದ ಪಾತ್ರ ಬಹಳಷ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಪಟ್ಟಣ ಪಂಚಾಯತ್ ಚುನಾವಣೆ ಸಂಬಂಧ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಹನೂರು ಪಟ್ಟಣ ಪಂಚಾಯತ್ ಚುನಾವಣೆ ಉಸ್ತುವಾರಿಯನ್ನು ನನಗೆ ವಹಿಸಿದ್ದು, ಪ್ರತಿಯೊಂದು ವಾರ್ಡ್ಗಳ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ಕಾರ್ಯಕರ್ತರು ಒಮ್ಮತದಿಂದ ಪ್ರಮಾಣಿಕವಾಗಿ ಶ್ರಮಿಸುವಂತೆ ಕೋರಿದರು.
ಶಾಸಕ ಆರ್.ನರೇಂದ್ರ ಮಾತನಾಡಿ, ಹನೂರು ಪಟ್ಟಣ ಪಂ. ಚುನಾವಣೆಯ ಉಸ್ತುವಾರಿಯಾಗಿ ಸಚಿವ ಪುಟ್ಟರಂಗ ಶೆಟ್ಟಿಯವರನ್ನು ಆಯ್ಕೆ ಮಾಡಿರುವುದರಿಂದ ಸಂತಸವಾಗಿದೆ. ಸಚಿವರಾದ ಪುಟ್ಟರಂಗಶೆಟ್ಟಿ ನೇತೃತ್ವದಲ್ಲಿ 13 ವಾರ್ಡ್ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದರು.
ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಶಿವಮ್ಮ, ಚಾಮುಲ್ ಅಧ್ಯಕ್ಷ ಗುರುಮಲ್ಲಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಂಪಯ್ಯ, ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ಚಿಕ್ಕತಮ್ಮಯ್ಯ, ರೋಟರಿ ಅಧ್ಯಕ್ಷ ಗಿರೀಶ್ ನಜೀರ್ಸಾಬ್, ಲಿಂಗರಾಜು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.