ಗಾಂಧಿ ಹಂತಕನ ಸಮರ್ಥನೆ ಅಪಾಯಕಾರಿ: ಡಿ.ಕೆ.ಶಿವಕುಮಾರ್
ಹುಬ್ಬಳ್ಳಿ, ಮೇ 17: ಮಹತ್ಮಾ ಗಾಂಧಿ ಕೊಂದವರನ್ನು ಸಮರ್ಥಿಸುತ್ತಿರುವ ಬಿಜೆಪಿ ನಾಯಕರು ದೇಶಕ್ಕೆ ಅಪಾಯಕಾರಿಗಳೆಂದು ಸಚಿವ ಡಿ.ಕೆ.ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಸದ ನಳೀನ್ ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆ ಮಹಾತ್ಮ ಗಾಂಧೀಜಿಯನ್ನು ಗುಂಡಿಕ್ಕಿ ಕೊಂದ ನಾಥೂರಾಮ ಗೂಡ್ಸೆಯನ್ನು ಬೆಂಬಲಿಸಿ ಹೇಳಿಕೆ ನೀಡುತ್ತಿರುವುದು ಅವರ ಹಿಂಸಾತ್ಮಕ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ ಎಂದರು.
ಮಹಾತ್ಮ ಗಾಂಧೀಜಿಯ ಅಹಿಂಸಾತ್ಮಕ ಹೋರಾಟವನ್ನು ಇಡೀ ವಿಶ್ವವೇ ಮೆಚ್ಚುತ್ತಿದೆ. ಅವರ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ನಾಯಕರು ಇಂತಹ ಹೇಳಿಕೆಗಳು ಭಾರತದ ಪ್ರಗತಿಗೆ ಕುಂಟಿತವಾಗುವಂತಹದ್ದು, ಸೌಹಾರ್ದತೆಯ ದೃಷ್ಟಿಯಿಂದ ಅಪಾಯಕಾರಿಯಾಗುವಂತಹದ್ದಾಗಿದೆ ಎಂದು ಅವರು ಅಭಿಪ್ರಾಯಿಸಿದರು.
Next Story