ವಾಹನ ಅಪಘಾತ: ಸಂಬಂಧಿಕನ ಅಂತ್ಯಕ್ರಿಯೆ ಮುಗಿಸಿ ಹಿಂದಿರುಗುತ್ತಿದ್ದ ಐವರು ಮೃತ್ಯು
ವಿಜಯಪುರ, ಮೇ 18: ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಟಾಟ್ ಏಸ್ ವಾಹನವೊಂದು ಉರುಳಿಬಿದ್ದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುದ್ದೇಬಿಹಾಳ ತಾಲೂಕಿನ ಕಂದಗನೂರ ಬಳಿ ನಡೆದಿದೆ.
ಇಬ್ಬರು ಮಹಿಳೆಯರ ಸಹಿತ ಒಟ್ಟು ಐವರು ಮೃತಪಟ್ಟಿದ್ದಾರೆ. ಇವರೆಲ್ಲರು ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಹಳದೂರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ.
ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವರನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಉರುಳಿಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
Next Story