ದ.ಕ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ- ಚಿಕ್ಕಮಗಳೂರು ಬಿಜೆಪಿ ಮಡಿಲಿಗೆ
ಬೆಂಗಳೂರು , ಮೇ 23: ಕರ್ನಾಟಕದಲ್ಲಿ ಲೋಕಸಭೆಯ ಚುನಾವಣೆಯಲ್ಲಿ ಬಳ್ಳಾರಿ, ಉತ್ತರಕನ್ನಡ, ಉಡುಪಿ-ಚಿಕ್ಕಮಗಳೂರು, ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿದೆ.
ಹಾವೇರಿಯಲ್ಲಿ ಬಿಜೆಪಿಯ ಶಿವಕುಮಾರ್ ಉದಾಸಿ, ಬಳ್ಳಾರಿಯಲ್ಲಿ ಬಿಜೆಪಿಯ ದೇವೇಂದ್ರಪ್ಪ.ಉತ್ತರ ಕನ್ನಡದಲ್ಲಿ ದಲ್ಲಿ ಅನಂತಕುಮಾರ್ ಹೆಗಡೆ, ಉಡುಪಿ-ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಮತ್ತು ದಕ್ಷಿಣ ಕನ್ನಡದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಭರ್ಜರಿ ಜಯ ಗಳಿಸಿದ್ದಾರೆ.
ಶಿವಮೊಗ್ಗದಲ್ಲಿ ಬಿ,ವೈ ರಾಘವೇಂದ್ರ 1,44,000 ಮತಗಳ ಅಂತರದಿಂದ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ನ ಡಿ.ಕೆ.ಸುರೇಶ್ ಜಯ ಗಳಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಇದೆ.
Next Story