ಚುನಾವಣೆ ಫಲಿತಾಂಶ ಅನಿರೀಕ್ಷಿತ: ಸಿಎಂ ಕುಮಾರಸ್ವಾಮಿ
ಬೆಂಗಳೂರು, ಮೇ 23: ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ. ಈ ಫಲಿತಾಂಶವನ್ನು ಗೌರವಿಸುತ್ತೇನೆ ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನಮಂತ್ರಿ ನರೇಂದ್ರಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ. ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸಲು ಜೊತೆಯಾಗಿ ಶ್ರಮಿಸೋಣ ಎಂದು ಅವರು ಹೇಳಿದ್ದಾರೆ.
ಚುನಾವಣೆಯ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Next Story