ಚಾಮರಾಜನಗರ: ಸಬ್ ರಿಜಿಸ್ಟರ್ ಕಚೇರಿಗೆ ಎಸಿಬಿ ದಾಳಿ
ಚಾಮರಾಜನಗರ, ಮೇ 27: ಸಬ್ ರಿಜಿಸ್ಟರ್ ಕಚೇರಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಚಾರ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ಬಂದ ದೂರಿನನ್ವಯ ಎಸಿಬಿ ಅಧಿಕಾರಿಗಳು ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿರುವ ಸಬ್ ರಿಜಿಸ್ಟರ್ ಕಚೇರಿಗೆ ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.
ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ಎಸಿಬಿ ಅಧಿಕಾರಿಗಳ ದಾಳಿ ನಡೆಸಿ, ಕಚೇರಿ ಸಿಬ್ಬಂದಿ ಹೊರತು ಪಡಿಸಿ ಸಾರ್ವಜನಿಕರನ್ನು ಹೊರಗಿಟ್ಟು ಬಾಗಿಲು ಮುಚ್ಚಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಹಿನ್ನೆಲೆ ಎಸಿಬಿ ಅಧಿಕಾರಿಗಳು ಧಿಡೀರ್ ಧಾಳಿ ನಡೆಸಿದ್ದಲ್ಲದೆ, ಕಚೇರಿಯ ಸಿಬ್ಬಂದಿ ಬಿಟ್ಟು ಬೇರೆಯವರನ್ನು ಹೊರ ಕಳುಹಿಸಿ ಬಾಗಿಲು ಮುಚ್ಚಿ ದಾಖಲೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ.
Next Story