16 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಮೇ 31: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು 16 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ-ತುಷಾರ್ ಗಿರಿನಾಥ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ- ಟಿ.ಕೆ.ಅನಿಲ್ ಕುಮಾರ್, ಸಾರ್ವಜನಿಕ ನಿರ್ದೇಶನಾಲಯದ ಆಯುಕ್ತ- ಡಾ.ಪಿ.ಸಿ.ಜಾಫರ್, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ-ಶಿವಯೋಗಿ ಸಿ.ಕಳಸದ್ರನ್ನು ವರ್ಗಾವಣೆ ಮಾಡಲಾಗಿದೆ.
ಗ್ರಾಮೀಣ ಕುಡಿಯುವ ನೀರು ಹಾಗೂ ಒಳಚರಂಡಿ ಏಜೆನ್ಸಿಯ ಆಯುಕ್ತ-ಡಾ.ವಿಶಾಲ್ ಆರ್., ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಹಣಕಾಸು ಹಾಗೂ ಐಟಿ)-ಡಾ.ಲೋಕೇಶ್ ಎಂ., ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಆಡಳಿತ)- ಡಿ.ರಣದೀಪ್ರನ್ನು ವರ್ಗಾವಣೆ ಮಾಡಲಾಗಿದೆ.
ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕ-ಎಸ್.ಎಸ್.ನಕುಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ-ಎಂ.ಕನಗವಲ್ಲಿ, ಮಂಡ್ಯ ಜಿಲ್ಲಾಧಿಕಾರಿ-ಮಂಜುಶ್ರೀ, ಬೆಳಗಾವಿ ಜಿಲ್ಲಾಧಿಕಾರಿ-ಡಾ.ಎಸ್.ಬಿ.ಬೊಮ್ಮನಹಳ್ಳಿಯನ್ನು ವರ್ಗಾವಣೆ ಮಾಡಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ-ಡಾ.ಅವಿನಾಶ್ ಮೆನನ್ ರಾಜೇಂದ್ರನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೆಲಮಂಗಲ-ಕುಣಿಗಲ್ ವಿಭಾಗದ ವಿಶೇಷ ಭೂ ಸ್ವಾಧೀನಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿಯನ್ನು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ವಿಜಯಪುರ ಜಿಲ್ಲಾಧಿಕಾರಿ-ಪಾಟೀಲ್ ಯಲಗೌಡ ಶಿವಾನಂದಗೌಡ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ-ವಿ.ಯಶವಂತ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ಪಿ.ಎ.ಮೇಘಣ್ಣನವರ್ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.