ಸಮಾಧಾನ ಆಗುವವರೆಗೂ ಅಸಮಾಧಾನ ಇರುತ್ತದೆ: ಶಾಸಕ ಬಿ.ಸಿ.ಪಾಟೀಲ್
ಹಾವೇರಿ, ಜೂ. 1: ‘ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದು ನನಗೆ ಸಮಾಧಾನ ಆಗುವವರೆಗೂ ಅಸಮಾಧಾನ ಇರುತ್ತದೆ. ಅದಕ್ಕೆ ಯಾವಾಗ ತೆರೆ ಬೀಳುತ್ತದೆಯೋ ಕಾದುನೋಡಬೇಕು’ ಎಂದು ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಶಾಸಕ. ಆಪರೇಷನ್ ಕಮಲದ ಬಗ್ಗೆ ನನಗೆ ಗೊತ್ತಿಲ್ಲ. ಆದರ ಬಗ್ಗೆ ಬಿಜೆಪಿಯವರನ್ನು ಕೇಳಬೇಕು. ಈ ಬಾರಿಯ ಮಂತ್ರಿ ಮಂಡಲದ ವಿಸ್ತರಣೆಯ ವೇಳೆ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದರು.
ಸಮನ್ವಯ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಈ ಬಾರಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ನನಗೂ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
Next Story