ಪತ್ರಿಕಾ ಛಾಯಾಗ್ರಾಹಕ ರಾಘವೇಂದ್ರ ನಿಧನ
ಮಂಡ್ಯ, ಜೂ.2: ವಿಜಯಕರ್ನಾಟಕ ಪತ್ರಿಕೆಯ ಛಾಯಾಗ್ರಾಹಕ ರಾಘವೇಂದ್ರ ರವಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳು ಇದ್ದಾರೆ.
ತೀವ್ರ ಹೃದಯಾಘಾತಕ್ಕೊಳಗಾದ ರಾಘವೇಂದ್ರ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಮೃತದೇಹವನ್ನು ನಾಳೆ(ಸೋಮವಾರ) ಮಧ್ಯಾಹ್ನದವರೆಗೂ ಮಂಡ್ಯದ ಕಾರಸವಾಡಿ ರಸ್ತೆಯ ವಿನಾಯಕ ಬಡಾವಣೆಯಲ್ಲಿರುವ ಅವರ ಅಣ್ಣ ಚಿದಾನಂದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 12ಗಂಟೆ ನಂತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story