ರೈಲ್ವೆ ಹಳಿ ಮೇಲೆ ಯುವಕನ ಶವ ಪತ್ತೆ: ಕೊಲೆ ಶಂಕೆ?
ಶಿವಮೊಗ್ಗ, ಜೂ. 6:ನಗರದ ಕೀರ್ತಿನಗರ ಬಡಾವಣೆಯ ರೈಲ್ವೆ ಹಳಿಯ ಮೇಲೆ ಯುವಕನೋರ್ವನ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತಪಟ್ಟ ಯುವಕ ಮೂಲತಃ ಹಾಸನದ, ಪ್ರಸ್ತುತ ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ವಾಸಿಸುತ್ತಿರುವ ಸಂತೋಷ (25) ಎಂದು ಗುರುತಿಸಲಾಗಿದೆ. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಇವರಿಗೆ ವಿವಾಹವಾಗಿದ್ದು, ಒಂದು ಮಗುವಿದೆ.
ಸಂತೋಷನ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ತಲೆಯ ಭಾಗಕ್ಕೆ ಹೊಡೆತ ಬಿದ್ದಿದೆ. ಬೇರೆಲ್ಲೋ ಹತ್ಯೆ ನಡೆಸಿ, ಶವವನ್ನು ರೈಲ್ವೆ ಹಳಿಯ ಮೇಲೆ ಎಸೆದು ಹೋಗಿರುವ ಅನುಮಾನಗಳು ವ್ಯಕ್ತವಾಗುತ್ತಿವೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದರು. ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story