ಜಿಂದಾಲ್ ಭೂಮಿ ವಾಪಸ್: ಸರಕಾರದ ತೀರ್ಮಾನಕ್ಕೆ ಎಚ್.ಕೆ.ಪಾಟೀಲ್ ಸ್ವಾಗತ
ಬೆಂಗಳೂರು, ಜೂ. 12: ಬಳ್ಳಾರಿಯ ಜಿಂದಾಲ್ ಕಂಪೆನಿಗೆ ಮಾರಾಟ ಮಾಡಿರುವ ಭೂಮಿಯನ್ನು ಹಿಂಪಡೆಯಲು ರಾಜ್ಯ ಸರಕಾರ ತೀರ್ಮಾನಿಸಿರುವ ಕ್ರಮ ಸ್ವಾಗತಾರ್ಹ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಜಿಂದಾಲ್ ಕಂಪೆನಿಗೆ ಸರಕಾರಿ ಭೂಮಿ ಮಾರಾಟ ಕುರಿತು ಮರುಪರಿಶೀಲನೆ ಮಾಡುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಿರ್ಣಯ ಸ್ವಾಗತಾರ್ಹ. ಆ ಕಾರಣಕ್ಕಾಗಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ ಅವರನ್ನು ಅಭಿನಂದಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Next Story