ಕೆಲಸಕ್ಕೆ ಹೋದ ಯುವಕ ಕಣ್ಮರೆ
ಶಿವಮೊಗ್ಗ, ಜೂ. 21: ಗ್ಯಾರೇಜ್ ಕೆಲಸಕ್ಕೆಂದು ತೆರಳಿದ ಯುವಕನೋರ್ವ ಮನೆಗೆ ಹಿಂದಿರುಗದೆ ಕಣ್ಮರೆಯಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಟಿಪ್ಪುನಗರದ ನಿವಾಸಿ ಪರ್ವೀಜ್ (25) ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ. ಈತ ಜೂ.18 ರಂದು ಗ್ಯಾರೇಜ್ ಕೆಲಸಕ್ಕೆಂದು ಮನೆಯಿಂದ ತೆರಳಿದ್ದ. ಆದರೆ ನಂತರ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story