ಶೀಲ ಶಂಕಿಸಿ ಪತ್ನಿಯ ಕತ್ತು ಕುಯ್ದು ಕೊಲೆಗೈದ ಪತಿ
ಮಂಡ್ಯ, ಜೂ.24: ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪತಿಯೇ ಪತ್ನಿಯನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆಗೈದಿರುವ ಘಟನೆ ಮಳವಳ್ಳಿ ತಾಲೂಕು ಕಿರುಗಾವಲು ಗ್ರಾಮದಲ್ಲಿ ನಡೆದಿದೆ.
ರವಿವಾರ ತಡರಾತ್ರಿ ಈ ಕೃತ್ಯ ನಡೆದಿದ್ದು, ಪತಿ ಕುಮಾರಸ್ವಾಮಿಯು ಪತ್ನಿ ಸೌಮ್ಯ(25) ಅವರನ್ನು ಕೊಲೆಗೈದು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಕುಮಾರಸ್ವಾಮಿ ಮತ್ತು ಸೌಮ್ಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story