ಮರಕ್ಕೆ ಓಮ್ನಿ ಕಾರು ಢಿಕ್ಕಿ: ಚಾಲಕ ಮೃತ್ಯು, ನಾಲ್ವರಿಗೆ ಗಾಯ
ಶಿವಮೊಗ್ಗ, ಜೂ.25: ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಸನ್ನಿವಾಸ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಕಾರು ಚಾಲಕ ಮಹದೇವ ಎಂದು ಗುರುತಿಸಲಾಗಿದೆ. ಹರೀಶ್, ಕೃಷ್ಣಪ್ಪ, ರವಿ, ಚನ್ನರಾಜು ಎಂಬುವರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರವಾರದಿಂದ ಶಿವಮೊಗ್ಗಕ್ಕೆ ಆಗಮಿಸುವ ವೇಳೆ ಈ ಅವಘಡ ಸಂಭಸಿದೆ. ಎದುರಿನಿಂದ ಬರುತ್ತಿದ್ದ ವಾಹನದ ಹೆಡ್ಲೈಟ್ ಬೆಳಕಿಗೆ ಚಾಲನೆಯ ನಿಯಂತ್ರಣ ಕಳೆದುಕೊಂಡ ಚಾಲಕ ಮರಕ್ಕೆ ಕಾರು ಢಿಕ್ಕಿ ಹೊಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story