ಸಾರಿಗೆ ಬಸ್-ಟಿಪ್ಪರ್ ಮುಖಾಮುಖಿ ಢಿಕ್ಕಿ: ಟಿಪ್ಪರ್ ಚಾಲಕ ಸ್ಥಳದಲ್ಲೇ ಮೃತ್ಯು
ಮಂಡ್ಯ, ಜೂ.26: ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್.ಪೇಟೆ ತಾಲೂಜಿನ ಅಗಸರಹಳ್ಳಿ ಗೇಟ್ ಬಳಿ ಬುಧವಾರ ಸಂಜೆ ನಡೆದಿದೆ.
ವಾಹನಗಳ ಮುಖಾಮುಖಿ ಢಿಕ್ಕಿ ರಭಸಕ್ಕೆ ಟಿಪ್ಪರ್ ಕ್ಯಾಬಿನ್ನಲ್ಲಿ ಚಾಲಕನ ಶವ ಸಿಲುಕಿದ್ದು, ಸ್ಥಳೀಯರ ಸಹಾಯದಿಂದ ಪೊಲೀಸರು ಹೊರ ತೆಗೆದಿದ್ದಾರೆ. ಈತ ತಮಿಳುನಾಡು ಮೂಲದವನೆಂದು ತಿಳಿದು ಬಂದಿದೆ.
ಅಪಘಾತದಲ್ಲಿ ಸಾರಿಗೆ ಬಸ್ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಕೆ.ಆರ್.ಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಆರ್.ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Next Story