ಸಾಗರ: ಲಾರಿ - ಬೈಕ್ ಢಿಕ್ಕಿ; ತಂದೆ, ಮಗ ಇಬ್ಬರು ಸ್ಥಳದಲ್ಲೇ ಮೃತ್ಯು
ಸಾಗರ: ಇಲ್ಲಿನ ಬೀಮನಕೋಣೆ ರಸ್ತೆ ಮುಂಗರವಳ್ಳಿ ಬಳಿ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿ ಹೊಸನಗರ ರಸ್ತೆಯಿಂದ ಸಾಗರಕ್ಕೆ ಹೋಗುತ್ತಿದ್ದು, ಬೈಕ್ ಸವಾರರು ಸಾಗರದ ಸಂತೆ ಮುಗಿಸಿಕೊಂಡು ಕಳಸವಳ್ಳಿಗೆ ಹೊರಟಿದ್ದರು ಎಂದು ತಿಳಿದುಬಂದಿದೆ.
ಬೈಕ್ ನ ಹಿಂಬದಿ ಕುಳಿತಿದ್ದ ಮಹಿಳೆಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
Next Story