ಶಾಸಕರು ಬಂಡಾಯವೆದ್ದರೆ ನಿರ್ದಾಕ್ಷಿಣ್ಯ ಕ್ರಮ: ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಎಚ್ಚರಿಕೆ
ಬೆಂಗಳೂರು, ಜು.2: ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರಕಾರದ ವಿರುದ್ಧ ಶಾಸಕರು ಬಂಡಾಯವೆದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತಕತೆ ನಡೆಸಿದ ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದ ವಿರುದ್ದ ಬಹಿರಂಗವಾಗಿ ಅಸಮಾಧಾನವನ್ನು ಹೊರಹಾಕಬಾರದೆಂದು ಸೂಚಿಸಲಾಗಿದೆ ಎಂದರು.
ಯಾವ ಶಾಸಕರೂ ರಾಜೀನಾಮೆ ಕೊಡುವುದಿಲ್ಲ. ಸರಕಾರಕ್ಕೂ ಯಾವುದೆ ಅಪಾಯವಿಲ್ಲ. ಹೀಗಾಗಿಯೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿದೇಶಕ್ಕೆ ಹೋಗಿದ್ದಾರೆ. ಯಾವುದೆ ಆತಂಕವಿಲ್ಲದೆ ಸಮ್ಮಿಶ್ರ ಸರಕಾರ ಐದು ವರ್ಷಗಳ ಆಡಳಿತಾವಧಿಯನ್ನು ಪೂರೈಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Next Story