ಕಂದಕಕ್ಕೆ ಉರುಳಿದ ಪೊಲೀಸ್ ಜೀಪ್: ಪಿಎಸ್ಸೈ, ಸಿಬ್ಬಂದಿಗೆ ಗಾಯ
ಚಿಕ್ಕಮಗಳೂರು, ಜು.6: ಪೊಲೀಸ್ ಇಲಾಖೆಯ ವಾಹನವೊಂದು ಪಲ್ಟಿಯಾಗಿ ಪಿಎಸ್ಐ ಹಾಗೂ ಸಿಬ್ಬಂದಿ ಗಾಯಗೊಂಡಿರುವ ಘಟನೆ ಶನಿವಾರ ನಗರ ಸಮೀಪದಲ್ಲಿ ವರದಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಅವರನ್ನು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರಿನಿಂದ ಮೂಡಿಗೆರೆಗೆ ಸಾಗುತ್ತಿದ್ದ ಪಿಎಸ್ಐ ರಘು ಅವರು ಪ್ರಯಾಣಿಸುತ್ತಿದ್ದ ಜೀಪ್ಗೆ ನಗರದ ಹೊರವಲಯದಲ್ಲಿರುವ ಸೆರಾಯಿ ಹೋಟೆಲ್ ಸಮೀಪ ಹಸುವೊಂದು ಅಡ್ಡ ಬಂದಿದ್ದು, ಹಸುವಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ ಚಾಲಕ ಹಾಗೂ ಪಿಎಸ್ಐ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.
Next Story