ನನಗೆ ರಾಜಕೀಯ ಪುನರ್ಜನ್ಮ ನೀಡಿದ್ದು ದೇವೇಗೌಡ ಅಲ್ಲ: ಎಚ್.ವಿಶ್ವನಾಥ್
"ಹೆಸರಿಗೆ ಮಾತ್ರ ಜೆಡಿಎಸ್ ಅಧ್ಯಕ್ಷನಾಗಿದ್ದೆ"
ಬೆಂಗಳೂರು, ಜು.7: ನನಗೆ ರಾಜಕೀಯ ಪುನರ್ಜನ್ಮ ನೀಡಿದ್ದು ದೇವೇಗೌಡ ಅಲ್ಲ, ಹುಣಸೂರು ಕ್ಷೇತ್ರದ ಜನ ಎಂದು ಹುಣಸೂರು ಶಾಸಕ, ಜೆಡಿಎಸ್ ನಾಯಕ ಎಚ್.ವಿಶ್ವನಾಥ್ ಹೇಳಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್.ವಿಶ್ವನಾಥ್ ಅವರು ಮುಂಬೈನ ಖಾಸಗಿ ಹೋಟೆಲ್ನಲ್ಲಿದ್ದಾರೆ. ‘ನಾನು ಹೆಸರಿಗೆ ಮಾತ್ರ ಜೆಡಿಎಸ್ ಅಧ್ಯಕ್ಷನಾಗಿದ್ದೆ. ನನ್ನ ಅಳಿಯನ ವರ್ಗಾವಣೆ ಮಾಡಿಸಲು ನನಗೆ ಸಾಧ್ಯವಾಗಲಿಲ್ಲ. ನನ್ನ ಅಳಿಯನಿಗೆ ಸಚಿವ ಸಾ.ರಾ.ಮಹೇಶ್ ಕುಡುಕನ ಪಟ್ಟ ಕಟ್ಟಿದರು. ಕುಮಾರಸ್ವಾಮಿಯವರು ನನ್ನ ಮಾತಿಗೆ ಮನ್ನಣೆ ನೀಡಲಿಲ್ಲ. ದುರಹಂಕಾರಿ ಸಿದ್ದರಾಮಯ್ಯ ಎಲ್ಲದಕ್ಕೂ ನಾನೆ ಅನ್ನೋ ಮನಸ್ಥಿತಿ ಬೆಳೆಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Next Story