ನಾಲ್ವರು ಅತೃಪ್ತರನ್ನು ಕರೆತರಲು ಡಿಕೆ ಸಹೋದರರ ಯತ್ನ?
ಬೆಂಗಳೂರು, ಜು.12: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಹೇಳಿದ ಬೆನ್ನಲ್ಲೆ ಅತೃಪ್ತ ಮನವೊಲಿಕೆಗೆ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಅತೃಪ್ತ ಶಾಸಕರಾದ ರಾಮಲಿಂಗಾರೆಡ್ಡಿ, ರೋಶನ್ ಬೇಗ್, ಆನಂದ್ ಸಿಂಗ್ ಹಾಗೂ ಮುನಿರತ್ನ ಮನವೊಲಿಸಿ, ಅವರು ಸಲ್ಲಿಸಿರುವ ರಾಜೀನಾಮೆ ಪತ್ರಗಳನ್ನು ಹಿಂಪಡೆಯುವಂತೆ ಮಾಡುವುದಾಗಿ ಮುಖ್ಯಮಂತ್ರಿಗೆ ಡಿ.ಕೆ.ಸಹೋದರರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿಯೂ ಈ ಅತೃಪ್ತರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆನಂದ್ ಸಿಂಗ್, ಶುಕ್ರವಾರ ಬೆಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಗೋವಾಗೆ ಪ್ರಯಾಣ ಬೆಳೆಸಿದ್ದಾರೆ.
Next Story