ರಾಜೀನಾಮೆ ಅಂಗೀಕಾರವಾಗಿಲ್ಲ,ನಾನು ಸದನದ ಸದಸ್ಯ : ರಾಮಲಿಂಗಾ ರೆಡ್ಡಿ
ಬೆಂಗಳೂರು, ಜು.15: ರಾಜೀನಾಮೆ ಅಂಗೀಕಾರವಾಗಿಲ್ಲ. ನಾನು ಸದನದ ಸದಸ್ಯ. ಅಧಿವೇಶನಕ್ಕೆ ಹಾಜರಾಗುತ್ತೇನೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಇಂದು ಸಂಜೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗುತ್ತೇನೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ ನ ಹಿರಿಯ ನಾಯಕರು ತಮ್ಮನ್ನು ಭೇಟಿಯಾಗಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಏನು ಚರ್ಚೆ ನಡೆದಿದೆ ಎಂದು ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Next Story