ಕೆಎಸ್ಆರ್ಟಿಸಿ ಬಸ್ ಢಿಕ್ಕಿ: ಪಾದಚಾರಿ ಮಹಿಳೆ ಮೃತ್ಯು
ಕೊಳ್ಳೇಗಾಲ.ಜು.15: ರಸ್ತೆ ಪುಟ್ಬಾತ್ನಲ್ಲಿ ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ನರೀಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಾಲೂಕಿನ ಹರಳೆ ಗ್ರಾಮದ ನಿಂಗಮ್ಮ(65) ಮೃತ ಮಹಿಳೆ.
ತನ್ನ ಗ್ರಾಮದಿಂದ ನಿಂಗಮ್ಮ ಅವರು ಸರಗೂರಿನ ಕಡೆಗೆ ಹೋಗುತ್ತಿದ್ದ ಸಂದರ್ಭ ಕೊಳ್ಳೇಗಾಲದ ಕಡೆಯಿಂದ ಬೆಂಗಳೂರು ಕಡೆಗೆ ಅತೀವೇಗದಿಂದ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನರೀಪುರ ಗ್ರಾಮದ ಸಮೀಪದ ಸೇತುವೆಯ ಬಳಿ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಬಸ್ ನಲ್ಲೇ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಆದರೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶವವನ್ನು ಶವಗಾರದಲ್ಲಿ ಇರಿಸಲಾಗಿದೆ.
Next Story