ಆರೋಗ್ಯವಾಗಿದ್ದು, ಯಾರೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ: ಸುಳ್ಳು ವದಂತಿಗಳಿಗೆ ತೆರೆ ಎಳೆದ ನಟ ದ್ವಾರಕೀಶ್
ಬೆಂಗಳೂರು, ಜು.16: ನಾನು ಆರೋಗ್ಯವಾಗಿದ್ದು, ಯಾರು ಸಹ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ಸಂದೇಶ ರವಾನಿಸಿ, ಸುಳ್ಳು ವಂದತಿಗಳಿಗೆ ತೆರೆ ಎಳೆದಿದ್ದಾರೆ.
ಸೋಮವಾರ ರಾತ್ರಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ ನಟ ದ್ವಾರಕೀಶ್ ನಿಧನ, ಇನ್ನಿಲ್ಲ ಎಂಬ ಸುಳ್ಳು ವದಂತಿ ಹಬ್ಬಿತ್ತು. ಇದನ್ನ ನೋಡಿದ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದರು. ಆದರೆ, ಈ ಬಗ್ಗೆ ಸ್ವತಃ ದ್ವಾರಕೀಶ್ ಅವರು ವಿಡಿಯೊ ಸಂದೇಶವೊಂದರ ಮೂಲಕ ಪ್ರತಿಕ್ರಿಯಿಸಿ, ನಾನು ಚೆನ್ನಾಗಿದ್ದೇನೆ, ಆರೋಗ್ಯವಾಗಿದ್ದೇನೆ. ಸುಳ್ಳು ಸುದ್ದಿಗಳಿಗೆ ಕಿವಿಗೊಡದಿರಿ ಎಂದಿದ್ದಾರೆ.
ಹೇಳಿದ್ದೇನು?: ನಮಸ್ಕಾರ, ನಿಮ್ಮ ದ್ವಾರಕೀಶ್, ಕರ್ನಾಟಕದ ಕುಳ್ಳ ಆರೋಗ್ಯವಾಗಿದ್ದೇನೆ. ಯಾವುದೇ ತರಹದ ಸುಳ್ಳು ವದಂತಿಗಳನ್ನು ನಂಬಬೇಡಿ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಆಶೀರ್ವಾದದಿಂದ ದ್ವಾರಕೀಶ್ ಚೆನ್ನಾಗಿದ್ದಾನೆ ಎಂದು ದೇವರಿಗೆ ಪೂಜೆ ಸಲ್ಲಿಸುತ್ತಿರುವ ವಿಡಿಯೊ ಮೂಲಕ ಸುಳ್ಳು ವದಂತಿಗೆ ಪ್ರತಿಕ್ರಿಯಿಸಿದ್ದಾರೆ.
Next Story