ನೈತಿಕತೆ ಇದ್ದರೆ ಅಧಿಕಾರ ಬಿಟ್ಟು ಹೋಗಿ : ಬಿಎಸ್ ವೈ
ಬೆಂಗಳೂರು, ಜು.20: ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಬಹುಮತ ಕಳೆದುಕೊಂಡಿದೆ. ನೈತಿಕತೆ ಇದ್ದರೆ ಅಧಿಕಾರ ಬಿಟ್ಟು ಹೋಗಿ ಎಂದು ವಿಪಕ್ಷ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಗುಡುಗಿದ್ದಾರೆ.
ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ತಂಗಿರುವ ಯಡಿಯೂರಪ್ಪ ಅವರು ಸರಕಾರಕ್ಕೆ ಬಹುಮತ ಇಲ್ಲ. ಈ ಕಾರಣದಿಂದಾಗಿ ಅಧಿಕಾರದಲ್ಲಿ ಮುಂದುವರಿಯಲು ನೈತಿಕ ಹಕ್ಕು ಇಲ್ಲ ಎಂದು ಹೇಳಿದ್ದಾರೆ.
ಸೋಮವಾರ ವಿಶ್ವಾಸಮತ ಯಾಚಿಸಲು ಒತ್ತಾಯಿಸುತ್ತೇವೆ ಎಂದು ಹೇಳಿದ ಯಡಿಯೂರಪ್ಪ ಅವರು ರಾಜ್ಯಪಾಲರ ಸೂಚನೆಯನ್ನು ಸರಕಾರ ಪಾಲಿಸುತ್ತಿಲ್ಲ. ರಾಜ್ಯದಲ್ಲಿ ಬರ ಇದೆ. ಅದರ ಬಗ್ಗೆಯೂ ಸರಕಾರಕ್ಕೆ ಗಮನ ಇಲ್ಲ ಎಂದು ಆರೋಪಿಸಿದರು.
Next Story