ಸುಂಟಿಕೊಪ್ಪ: ರಸ್ತೆ ಅಪಘಾತಕ್ಕೆ ಇಬ್ಬರು ಪ್ರವಾಸಿಗರು ಬಲಿ
ಮಡಿಕೇರಿ, ಜು.20: ಅನಿಲ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತ ಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪ ಬಾಳೆಕಾಡು ಎಂಬಲ್ಲಿ ನಡೆದಿದೆ.
ಶನಿವಾರ ಮುಂಜಾನೆ 6.30 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಮೃತರು ಕೋಲಾರ ಮೂಲದವರೆಂದು ತಿಳಿದು ಬಂದಿದೆ. ಮತ್ತಿಬ್ಬರಿಗೆ ತೀವ್ರ ಗಾಯಗಳಾಗಿದೆ.
ಪ್ರವಾಸಕ್ಕೆಂದು ಮಡಿಕೇರಿಗೆ ಬರುತ್ತಿದ್ದ ಕಾರಿನಲ್ಲಿದ್ದ ನಾಲ್ವರಲ್ಲಿ ಕಿರಣ್(23) ಹಾಗೂ ಶ್ರವಣ್(25) ಮೃತರು. ಗಾಯಗೊಂಡಿರುವ ರಾಜು ಹಾಗೂ ಪುಟ್ಟೇಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.
ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story