ಐಪಿಎಸ್ ಅಧಿಕಾರಿ ಟಿ.ಪಿ.ಶಿವಕುಮಾರ್ ವರ್ಗಾವಣೆ ವಿಚಾರ: ಯಥಾಸ್ಥಿತಿ ಕಾಪಾಡಲು ಸಿಎಟಿ ಆದೇಶ
ಬೆಂಗಳೂರು, ಆ.7: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಸ್ಥಾನದಿಂದ ಐಪಿಎಸ್ ಅಧಿಕಾರಿ ಟಿ.ಪಿ.ಶಿವಕುಮಾರ್ ಅವರನ್ನು ವರ್ಗಾವಣೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ಸಿಎಟಿ(ಕೇಂದ್ರೀಯ ಆಡಳಿತ ನ್ಯಾಯಮಂಡಳಿ) ಯಥಾಸ್ಥಿತಿ ಕಾಪಾಡಿಕೊಂಡು ಹೋಗಲು ರಾಜ್ಯ ಸರಕಾರಕ್ಕೆ ಆದೇಶಿಸಿದೆ.
ಬೆಂಗಳೂರು ಎಸ್ಪಿ ಆಗಿದ್ದ ಶಿವಕುಮಾರ್ ಅವರನ್ನು ಯಾವುದೇ ಸ್ಥಾನವನ್ನು ತೋರಿಸದೆ ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಸ್ಥಾನಕ್ಕೆ ರವಿ ಡಿ. ಚೆನ್ನಣ್ಣನವರನ್ನು ನೇಮಕ ಮಾಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ಶಿವಕುಮಾರ್ ಅವರು ಸಿಎಟಿ ಮೆಟ್ಟಿಲೇರಿದ್ದರು. ಬುಧವಾರ ನ್ಯಾಯಪೀಠವು ಶಿವಕುಮಾರ್ ವರ್ಗಾವಣೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿಕೊಂಡು ಆದೇಶಿಸಿದೆ. ಅಲ್ಲದೆ, ಸದ್ಯ ಅಡ್ವೊಕೇಟ್ ಜನರಲ್ ಅವರಿಗೆ ನೋಟಿಸ್ ನೀಡಿ. ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ಸಿಎಟಿಗೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಆ.14ಕ್ಕೆ ಮುಂದೂಡಿದೆ.
Next Story