ಪ್ರವಾಹ ಪರಿಸ್ಥಿತಿ: ಆರೋಗ್ಯ ಇಲಾಖೆ ಅಧಿಕಾರಿ-ಸಿಬ್ಬಂದಿಗೆ ರಜೆ ಇಲ್ಲ
ಸಾಂದರ್ಭಿಕ ಚಿತ್ರ
ಬೆಂಗಳೂರು, ಆ. 8: ಮಳೆ-ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಗದಗ, ಚಿಕ್ಕಮಗಳೂರು, ಹಾವೇರಿ, ಶಿವಮೊಗ್ಗ, ಬೀದರ್, ಬೆಳಗಾವಿ, ಚಿಕ್ಕೋಡಿ, ರಾಯಚೂರು, ಬಾಗಲಕೋಟೆ, ಯಾದಗಿರಿ, ವಿಜಯಪುರ, ಕೊಪ್ಪಳ, ಧಾರವಾಡ, ಬಳ್ಳಾರಿ, ಹಾಸನ, ಉಡುಪಿ, ಕಲಬುರ್ಗಿ ಜಿಲ್ಲೆಗಳ ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಆ.9ರಿಂದ ಆ.15ರ ವರೆಗೆ ರಜೆ ಮಂಜೂರು ಮಾಡದಂತೆ ಸೂಚಿಸಲಾಗಿದೆ.
9, 10, 11, 12 ಮತ್ತು 15ರಂದು ನಿರ್ಭಂದಿತ ರಜೆ ಇದ್ದು, ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ನೆರೆ ಹಾವಳಿ ಕಡಿಮೆಯಾಗಿ, ಪರಿಸ್ಥಿತಿ ಸುಧಾರಿಸುವವರೆಗೂ ಆರೋಗ್ಯ ಇಲಾಖೆ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ರಜೆ ಮಂಜೂರು ಮಾಡಬಾರದು ಎಂದು ಮೇಲ್ಕಂಡ ಎಲ್ಲ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದೆ.
Next Story