ಕರ್ನಾಟಕ ಪ್ರವಾಹ: ಇಂದು ಕೇಂದ್ರ ಸಚಿವ ಅಮಿತ್ ಶಾ ವೈಮಾನಿಕ ಸಮೀಕ್ಷೆ
ಬೆಂಗಳೂರು, ಆ.10: ನೆರೆ ಹಾವಳಿಯಿಂದ ತತ್ತರಿಸಿರುವ ಬೆಳಗಾವಿ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರವಿವಾರ ಮಧ್ಯಾಹ್ನ 2:30ರ ಸುಮಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್ ಮೂಲಕ 2:45ಕ್ಕೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಆರಂಭಿಸಲಿರುವ ಅಮಿತ್ ಶಾ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ, ಆನಂತರ ಸಂಜೆ 4:30ಕ್ಕೆ ವಿಮಾನ ನಿಲ್ದಾಣದಲ್ಲೇ ಸರಕಾರದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ರವಿವಾರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ಸಿಎಂ ರದ್ದುಗೊಳಿಸಿದ್ದಾರೆ.
Next Story