ಸಹಾಯ ಕೇಳಿದ ಸಂತ್ರಸ್ತರ ವಿರುದ್ಧ ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶ: ಆರೋಪ
ಆಡಿಯೊ ವೈರಲ್
ಚಿಕ್ಕಮಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಸಹಾಯ ಕೇಳಿದ ಸಂತ್ರಸ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ.
ಮದುಗುಂಡಿಯ ಯುವಕನೊಬ್ಬ ಪ್ರವಾಹಕ್ಕೆ ಮನೆ ಕೊಚ್ಚಿ ಹೋಗಿದೆ, ಸಹಾಯ ಮಾಡಿ ಎಂದು ಶಾಸಕ ಎಂ.ಪಿ ಕುಮಾರಸ್ವಾಮಿ ಅವರಿಗೆ ಕರೆ ಮಾಡಿದ್ದು, ಈ ವೇಳೆ ಸಿಟ್ಟಿಗೆದ್ದ ಶಾಸಕರು ಅವಾಚ್ಯ ಶಬ್ದಗಳಿಂದ ಯುವಕನಿಗೆ ನಿಂದಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಅದಕ್ಕೆ ಸಂಬಂಧಿಸಿದ್ದು ಎನ್ನಲಾದ ಮೊಬೈಲ್ ಕರೆಯ ಆಡಿಯೊ ಒಂದು ವೈರಲ್ ಆಗಿದೆ.
Next Story